fbpx
EducationKarnataka News
Trending

ಪಿಯು ಪರೀಕ್ಷೆಯಲ್ಲಿ ಫೇಲ್​, ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ: ಫಸ್ಟ್​ ಕ್ಲಾಸ್​ನಲ್ಲಿ ಪಾಸ್​ ಆದ್ರೂ ನಿವೃತ್ತ ಯೋಧನ ಮಗಳು ಸಾವು

ಗದಗ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಅನುತೀರ್ಣ, ನಿರೀಕ್ಷಿಸಿದ ಫಲಿತಾಂಶ ಬರಲಿಲ್ಲ ಎಂಬ ಕಾರಣಕ್ಕೆ ಮನನೊಂದು ರಾಜ್ಯದ ವಿವಿಧೆಡೆ ನಾಲ್ವರು ವಿದ್ಯಾರ್ಥಿಗಳು ಸಾವಿನ ಮನೆಯ ಕದ ತಟ್ಟಿದ್ದಾರೆ. ಮಕ್ಕಳ ದುಡುಕಿನ ನಿರ್ಧಾರ ಇಡೀ ಕುಟುಂಬವನ್ನೇ ಕಣ್ಣೀರಲ್ಲಿ ಮುಳುಗಿಸಿದೆ.

ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ.

ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ‌ ಕಡ್ಲೆ ಗ್ರಾಮದ ಪ್ರಣಮ್ ಈಶ್ವರ್ ನಾಯ್ಕ(18), ಗದಗ ತಾಲೂಕಿನ ಹರ್ತಿ ಗ್ರಾಮದ ಪವಿತ್ರ ಲಿಂಗದಾಳ(18), ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದ ಎಂ.ಜೆ.ಸ್ಪಂದನಾ(17) ಮತ್ತು ಕೊಡಗು ಜಿಲ್ಲೆಯ ಬಸವನಹಳ್ಳಿಯ ಸಂಧ್ಯಾ(18) ಮೃತ ದುರ್ದೈವಿಗಳು.

ಫೇಲ್​ ಆಗಿದ್ದಕ್ಕೆ ಮೂವರು ಆತ್ಮಹತ್ಯೆ: ಕುಮಟಾ ತಾಲೂಕಿನ‌ ಎ.ವಿ ಬಾಳಿಗಾ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರಣಮ್ ಈಶ್ವರ್ ನಾಯ್ಕ, 4 ವಿಷಯಗಳಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆ ಜಿಗುಪ್ಸೆಗೊಂಡು ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಕುಮಟಾ‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗದಗ ನಗರದ ಖಾಸಗಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಹರ್ತಿ ಗ್ರಾಮದ ಪವಿತ್ರ ಲಿಂಗದಾಳ, ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ಮನನೊಂದು ಮನೆಯಲ್ಲೇ ಪವಿತ್ರಾ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಪೋಷಕರು ಗದಗ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ದರಾದರೂ ಮಾರ್ಗಮಧ್ಯೆ ಕೊನೆಯುಸಿಳೆದರು.

ಮಂಡ್ಯದ ಸ್ಯಾಂಥೋಂ ಕಾಲೇಜಿನಲ್ಲಿ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಶ್ರೀರಂಗಪಟ್ಟಣ ತಾಲೂಕಿನ ಸ್ಪಂದನಾ, ಮೂರು ವಿಷಯದಲ್ಲಿ ಅನುತೀರ್ಣಗೊಂಡಿದ್ದಕ್ಕೆ ಜಿಗುಪ್ಸೆಯಿಂದ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.

ನಿರೀಕ್ಷಿತ ಅಂಕ ಬರದಿದ್ದಕ್ಕೆ ಆತ್ಮಹತ್ಯೆ: ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ. ನಿರೀಕ್ಷಿತ ಫಲಿತಾಂಶ ಬರಲಿಲ್ಲ ಎಂದು ಬೇಸರಗೊಂಡ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಹೆರೂರು ನಿವಾಸಿ, ನಿವೃತ್ತ ಯೋಧ ಸುಭಾಷ್ ಅವರ ಪುತ್ರಿ ಸಂಧ್ಯಾ ಸಾವಿನ ಮನೆಯ ಕದ ತಟ್ಟಿದ್ದಾಳೆ. ಈಕೆ ವಿವೇಕಾನಂದ ಕಾಲೇಜಿನಲ್ಲಿ ಓದುತ್ತಿದ್ದಳು. ದ್ವಿತೀಯ ಪಿಯುಸಿಯಲ್ಲಿ ಶೇ.77ಅಂಕ ಬಂದಿತ್ತು. ಶೇ.90ಕ್ಕೂ ಹೆಚ್ಚು ಅಂಕ ಬರುವ ನಿರೀಕ್ಷೆಯಲ್ಲಿ ಇದ್ದಳಂತೆ.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: