fbpx
Karnataka News

BIGG NEWS: ಈದ್ಗಾ ವಿವಾದಕ್ಕೆ ಮೇಜರ್‌ ಟ್ವಿಸ್ಟ್‌

ಬೆಂಗಳೂರು : ಈದ್ಗಾ ಮೈದಾನ ವಿವಾದ ಮತ್ತೆ ಮೇಜರ್‌ ಟ್ವಿಸ್ಟ್‌ ಗೆ ಎದುರಾಗಿದೆ. ಬೆಂಗಳೂರಿನ ಚಾಮರಾಜ ನಗರದಲ್ಲಿರುವ ಈದ್ಗಾ ಮೈದಾನ ಬಿಬಿಎಂಪಿಗೆ ಸೇರಿದ್ದು ಎಂದಿದ್ದರು. ಬಿಬಿಎಂಪಿ ಆಯುಕ್ತ ಇದೀಗ ʼ ಈದ್ಗಾ ಮೈದಾನ ಬಿಬಿಎಂಪಿ ಮಾಲಿಕತ್ವದಲ್ಲಿಲ್ಲʼ ಎಂದು ತುಷಾರ್‌ ಗಿರಿನಾಥ್‌ ಸ್ಪಷನೆ ಕೊಡುವ ಮೂಲಕ ಯೂ ಟರ್ನ್‌ ಹೊಡೆದಿದ್ದಾರೆ.

ವಕ್ಫ್‌ ಬೋರ್ಡ್‌ ದಾಖಲೆ ನೀಡಿದ್ರೆ ವಕ್ಫ್‌ ಹೆಸರಿಗೆ ಖಾತೆ ನೀಡಲಾಗುವುದು. BBMPಗೆ ವಕ್ಫ್‌ ಬೋರ್ಡ್‌ ಸರಿಯಾದ ಮಾಹಿತಿ ಸಲ್ಲಿಸಬೇಕು . ಇಲ್ಲದಿದ್ರೆ ಸರ್ಕಾರದ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಸ್ಪಷನೆ ನೀಡಿದ್ದಾರೆ.

ಈ ಹಿಂದೆ ಚಾಮರಾಜ ಪೇಟೆಯ ಈದ್ಗಾ ಮೈದಾನ ತಮ್ಮ ಸ್ವತ್ತು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದ ಬೆನ್ನಲ್ಲೇ ಮುಸ್ಲಿಂ ಸಂಘಟನೆಗಳು ಮತ್ತು ಮುಖಂಡರು ಈದ್ಗಾ ಮೈದಾನ ಆಸ್ತಿ ವಕ್ಫ್ಬೋರ್ಡ್‌ಗೆ ಸೇರಿದ್ದೆಂದು ದಾಖಲೆ ಸಮೇತ ಸಮರ್ಥನೆಗೆ ಇಳಿದಿವೆ. ತನ್ಮೂಲಕ ಈದ್ಗಾ ಮೈದಾನ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ.

ಮಂಗಳವಾರ ವಕ್ಫ್ ಬೋರ್ಡ್‌ ಅಧ್ಯಕ್ಷ ಮೌಲಾನಾ ಶಾಫಿ ಸಅದಿ, ಈದ್ಗಾ ಮೈದಾನಕ್ಕೆ ಸಂಬಂಧಪಟ್ಟದಾಖಲೆ ಬಿಡುಗಡೆ ಮಾಡಿದ್ದು ಈದ್ಗಾ ಮೈದಾನ ಬಿಬಿಎಂಪಿ ಸ್ವತ್ತಲ್ಲ ವಕ್ಫ್ ಮಂಡಳಿ ಆಸ್ತಿ. ವಕ್ಫ್ ಗೆಜೆಟ್‌ನಲ್ಲಿ ಈ ಬಗ್ಗೆ ದಾಖಲಾಗಿದೆ. ಇಂತಹ ಜಾಗದಲ್ಲಿ ಬೇರೆ ಸಮುದಾಯಗಳ ಹಬ್ಬ ಆಚರಣೆಗೆ ಬೇರೆಯವರಿಗೆ ಹೇಗೆ ಅವಕಾಶ ಕೊಡುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮೌಲಾನಾ ಶಾಫಿ ಸಅದಿ ಅವರು, ಬಿಬಿಎಂಪಿ ಕಳೆದು ಹೋದ ಆಟದ ಮೈದಾನವನ್ನು ಹುಡುಕಲಿ. ಅದು ಬಿಟ್ಟು ನಮ್ಮ ವಕ್ಫ್ ಆಸ್ತಿಯನ್ನು ಆಟದ ಮೈದಾನ ಎನ್ನುವುದು ಬೇಡ ಎಂದಿದ್ದಾರೆ. ಜೊತೆಗೆ ವಕ್ಫ್ ಬೋರ್ಡ್‌ ಆಸ್ತಿಯಲ್ಲಿ ಬೇರೆಯವರಿಗೆ ಅವಕಾಶ ನೀಡುವುದಿಲ್ಲ. ಸುಪ್ರೀಂ ಆದೇಶದ ಪ್ರಕಾರ ಈದ್ಗಾ ಮೈದಾನ ವಕ್ಫ್ ಬೋರ್ಡ್‌ ಆಸ್ತಿ. ಇಲ್ಲಿ ಇತರೆ ಕಾರ್ಯಕ್ರಮ ಆಯೋಜನೆಗೂ ಮೊದಲು ಯೋಚನೆ ಮಾಡಲಿ. ಇಲ್ಲದಿದ್ದರೆ ಕೋಮು ಗಲಭೆಗೆ ಕಾರಣವಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿರುಗೇಟು ನೀಡಿದ್ದಾರೆ.

ಪ್ರತಿ ವರ್ಷ ಮಸೀದಿಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡುತ್ತೇವೆ. ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಕ್ಫ್ನವರು ಮಾಡುತ್ತಾರೆ. ಇಲ್ಲವೇ ಸ್ಥಳೀಯ ಶಾಸಕರ ಹಿಂದೂ ಸಂಘಟನೆಗಳಿಂದ ಅರ್ಜಿ

ಈ ನಡುವೆಯೇ ಹಿಂದೂ ಸಂಘಟನೆಗಳು ಮೈದಾನದಲ್ಲಿ ಹಬ್ಬ ಮಾಡುವುದಕ್ಕೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಲು ಮುಂದಾಗಿವೆ. ಶ್ರೀರಾಮ ಸೇನೆಯು ಪಾಲಿಕೆಗೆ ಅರ್ಜಿ ಸಲ್ಲಿಸಿ ಜೂನ್‌ 21ರಂದು ಯೋಗ ದಿನವನ್ನು ಆಚರಿಸಲು ಅನುಮತಿ ಕೋರಿದೆ. ಹಾಗೆಯೇ ಹಿಂದು ಸಂಘಟನೆಯೊಂದು ಜೂನ್‌ 14 ಮತ್ತು 15 ರಂದು ಸ್ವಾತಂತ್ರ್ಯೋತ್ಸವದ ಆಚರಣೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದೆ ಎಂದು ಪಶ್ಚಿಮ ವಲಯದ ಅಧಿಕಾರಿಗಳು ಮಾಹಿತಿ ನೀಡಿದರು.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: