fbpx
Karnataka NewsNational

ಹೋಟೆಲ್, ರೆಸ್ಟೋರೆಂಟ್​ಗಳು ಗ್ರಾಹಕರಿಂದ ಸರ್ವೀಸ್ ಚಾರ್ಜ್ ಸಂಗ್ರಹಿಸುವಂತಿಲ್ಲ; ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಆದೇಶ

ಹೋಟೇಲ್, ರೆಸ್ಟೋರೆಂಟ್ ಗಳು ಗ್ರಾಹಕರಿಂದ ಸರ್ವೀಸ್ ಚಾರ್ಜ್ ಸಂಗ್ರಹಿಸುವಂತಿಲ್ಲ ಹಾಗೂ ಗ್ರಾಹಕರಿಗೆ ಸರ್ವೀಸ್ ಚಾರ್ಜ್ ನೀಡುವಂತೆ ಬಲವಂತ ಮಾಡುವಂತಿಲ್ಲ ಎಂದು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಇಂದು (ಜುಲೈ 4) ಆದೇಶ ಹೊರಡಿಸಿದೆ.

ನವದೆಹಲಿ: ಹೋಟೆಲ್ ( Hotel ), ರೆಸ್ಟೋರೆಂಟ್​​ಗಳು ( Restaurants ) ಗ್ರಾಹಕರಿಂದ ( Customer ) ಸರ್ವೀಸ್ ಚಾರ್ಜ್ ( Service Charge ) ಸಂಗ್ರಹಿಸುವಂತಿಲ್ಲ ಹಾಗೂ ಗ್ರಾಹಕರಿಗೆ ಸರ್ವೀಸ್ ಚಾರ್ಜ್ ನೀಡುವಂತೆ ಬಲವಂತ ಮಾಡುವಂತಿಲ್ಲ ಎಂದು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಇಂದು (ಜುಲೈ 4) ಆದೇಶ ಹೊರಡಿಸಿದೆ.

ಹೋಟೆಲ್ , ರೆಸ್ಟೋರೆಂಟ್ ಸರ್ವೀಸ್ ಚಾರ್ಜ್ ವಿಧಿಸಿದರೇ, ರಾಷ್ಟ್ರೀಯ ಗ್ರಾಹಕರ ಹೆಲ್ಪ್​ಲೈನ್​​ಗೆ 1915ಗೆ ದೂರು ನೀಡಬಹುದು ಎಂದು ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ಆದೇಶದಲ್ಲಿ ತಿಳಿಸಿದೆ.

ಹೋಟೆಲ್, ರೆಸ್ಟೋರೆಂಟ್​ಗಳು ಈಗಾಗಲೇ ತಿಂಡಿ-ತಿನಿಸುಗಳ ದರವನ್ನು ಹೆಚ್ಚಿಸಿದ್ದು, ಈ ಮಧ್ಯೆ ಸೇವಾ ಶುಲ್ಕ ಗ್ರಾಹಕರಿಕೆ ಹೊರೆಯಾಗುತ್ತದೆ. ಹೀಗಾಗಿ ಸೇವಾ ಶುಲ್ಕ ವಿಧಿಸುವುದು ಅನ್ಯಾಯದ ವ್ಯಾಪಾರವೆಂದು ಮತ್ತು ಗ್ರಾಹಕರ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟಲು CCPA ಈ ಮಾರ್ಗಸೂಚಿಯನ್ನು ಹೊರಡಿಸಿದೆ.

ಮಾರ್ಗಸೂಚಿಗಳ ಪ್ರಕಾರ, “ಯಾವುದೇ ಹೋಟೆಲ್‌ಗಳು ಅಥವಾ ರೆಸ್ಟೋರೆಂಟ್‌ಗಳು ಗ್ರಾಹಕರಿಂದ  ಸರ್ವೀಸ್ ಚಾರ್ಜ್  ಸಂಗ್ರಹಿಸುವಂತಿಲ್ಲ ಹಾಗೂ ಗ್ರಾಹಕರಿಗೆ ಸರ್ವೀಸ್ ಚಾರ್ಜ್ ನೀಡುವಂತೆ ಬಲವಂತ ಮಾಡುವಂತಿಲ್ಲ  ಅಥವಾ ಬೇರೆ ಯಾವುದೇ ಹೆಸರಿನಿಂದ ಸೇವಾ ಶುಲ್ಕವನ್ನು ಸಂಗ್ರಹಿಸುವಂತಿಲ್ಲ ಎಂದು ತಿಳಿಸಿದೆ.

ಯಾವುದೇ ಹೋಟೆಲ್ ಅಥವಾ ರೆಸ್ಟೋರೆಂಟ್‌ಗಳು ಸೇವಾ ಶುಲ್ಕವನ್ನು ಪಾವತಿಸಲು ಗ್ರಾಹಕರನ್ನು ಒತ್ತಾಯಿಸುವಂತಿಲ್ಲ. ಸೇವಾ ಶುಲ್ಕ ಪಾವತಿಸುವುದು ಗ್ರಾಹಕರ ವಿವೇಚನೆಗೆ ಬಿಟ್ಟಿದ್ದು. ಸೇವಾ ಶುಲ್ಕದ ಸಂಗ್ರಹದ ಆಧಾರದ ಮೇಲೆ ಸೇವೆಗಳಲ್ಲಿ ಕೊರತೆ ಉಂಟು ಮಾಡುವಂತಿಲ್ಲ ಎಂದು ತಿಳಿಸಿದೆ.

ಇದಲ್ಲದೆ, ಆಹಾರದ ಬಿಲ್‌ನೊಂದಿಗೆ  ಜಿಎಸ್‌ಟಿ ವಿಧಿಸುವ ಮೂಲಕ ಸೇವಾ ಶುಲ್ಕವನ್ನು ಸಂಗ್ರಹಿಸುವಂತಿಲ್ಲ. ಮಾರ್ಗಸೂಚಿಯನ್ನು ಉಲ್ಲಂಘಿಸಿ ಹೋಟೆಲ್ ಅಥವಾ ರೆಸ್ಟೊರೆಂಟ್ ಸೇವಾ ಶುಲ್ಕವನ್ನು ವಿಧಿಸಿದರೆ ಗ್ರಾಹಕರು  ಬಿಲ್ ಮೊತ್ತದಿಂದ ಸೇವಾ ಶುಲ್ಕವನ್ನು ತೆಗೆದುಹಾಕವಂತೆ ಹೋಟೆಲ್ ಅಥವಾ ರೆಸ್ಟೊರೆಂಟ್​ಗೆ ತಿಳಿಸಬಹುದು. ಈ ಸಂಬಂಧ ಗ್ರಾಹಕರು 1915 ಗೆ ಕರೆ ಮಾಡುವ ಮೂಲಕ  ಗ್ರಾಹಕ ಆಯೋಗಕ್ಕೂ ದೂರು ಸಲ್ಲಿಸಬಹುದು.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d