Karnataka News
BREAKING NEWS : ಹುಬ್ಬಳ್ಳಿಯ ಸುಳ್ಳ ಗ್ರಾಮದಲ್ಲಿ ನಾಳೆ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

ಹುಬ್ಬಳ್ಳಿ : ಚಂದ್ರಶೇಖರ್ ಗುರೂಜಿ ಅಂತ್ಯಸಂಸ್ಕಾರ ನಾಳೆ ಹುಬ್ಬಳ್ಳಿಯ ಸುಳ್ಳ ಗ್ರಾಮದ ಗುರೂಜಿಯವರ ಸ್ವಂತ ಜಮೀನಿನಲ್ಲಿ ಮಾಡಲಾಗುತ್ತೆ. ಈ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚಿಸಲಾಗಿದೆ ಎಂದು ಪರಿಚಯಸ್ಥ ಮೋಹನ ಲಿಂಬಿಕಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಪರಿಚಯಸ್ಥ ಮೋಹನ ಲಿಂಬಿಕಾಯಿ, ‘ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸುಳ್ಳ ಗ್ರಾಮದ ರಸ್ತೆಯ ಜಮೀನಿನಲ್ಲಿ ನಡೆಯಲಿದೆ. ಈ ಬಗ್ಗೆ ಕುಟುಂಬಸ್ಥರ ಬಳಿ ಚರ್ಚಿಸಿಲಾಗಿದ್ದು, ಮರಣೋತ್ತರ ಪರೀಕ್ಷೆಯೂ ನಾಳೆ ನಡೆಯುವ ಸಾಧ್ಯತೆ ಇದೆ ಎಂದರು.
ಇನ್ನು ಗುರೂಜಿಗೆ ಬಹಳಷ್ಟು ಅನುಯಾಯಿಗಳಿದ್ದು, ದೇಶದ ಬೇರೆ ಬೇರೆ ಕಡೆಗಳಲ್ಲೂ ಅನುಯಾಯಿಗಳಿದ್ದಾರೆ. ಹಾಗಾಗಿ ಅವ್ರು ನಾಳೆ ಒಂದು ಗಂಟೆಯವರೆಗೆ ಗುರೂಜಿಯವರ ಅಂತಿಮ ದರ್ಶನ ಪಡೆಯಬೋದು ಎಂದರು.