Karnataka News
BREAKING NEWS : ವಿಜಯಪುರದಲ್ಲಿ ಘೋರ ದುರಂತ : ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿ ಹಂದಿಗನೂರಿನಲ್ಲಿ ಈ ಘಟನೆ ನಡೆದಿದ್ದು, ಅವ್ವಮ್ಮಾ ಶ್ರೀಶೈಲ ಗುಬ್ಬೆವಾಡ (32) ತನ್ನ 3 ವರ್ಷದ ಹಾಗೂ 1 ವರ್ಷದ ಹೆಣ್ಣು ಮಗುವನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವ್ವಮಾ ಕಳೆದ 6 ತಿಂಗಳಿನಿಂದ ಖಿನ್ನತೆಗೆ ಒಳಗಾಗಿದ್ದು, ಪತಿ ಶ್ರೀಶೈಲ ಗುಬ್ಬೆವಾಡ ಕುರಿಮೇಯಿಸಲು ಹೋಗಿದ್ದ ವೇಳೆ ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಮೂವರು ಮೃತದೇಹಗಳನ್ನು ಬಾವಿಯಿಂದ ಗ್ರಾಮಸ್ಥರು ಮೇಲೆತ್ತಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿಂಧಗಿ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.