fbpx
All Categories AdvertisementEntertainmentKarnataka NewsNational

KGF Chapter 2: ಟಿವಿಯಲ್ಲಿ ಬರೋಕೆ ರೆಡಿ ಆಯ್ತು ‘ಕೆಜಿಎಫ್ 2’; ಹೊಸ ಅಪ್ಡೇಟ್ ನೀಡಿದ ಜೀ ಕನ್ನಡ

‘ಕೆಜಿಎಫ್ 2’ ಚಿತ್ರವನ್ನು ಸಾಕಷ್ಟು ಮಂದಿ ಥಿಯೇಟರ್​ನಲ್ಲಿ ಕಣ್ತುಂಬಿಕೊಂಡರು. ನಂತರ ಒಟಿಟಿಯಲ್ಲಿ ರಿಲೀಸ್ ಆದಾಗಲೂ ಸಿನಿಮಾ ನೋಡಿ ಖುಷಿಪಟ್ಟರು. ಈಗ ಸಿನಿಮಾ ಟಿವಿಯಲ್ಲಿ ಬರುತ್ತಿದೆ.‘ಕೆಜಿಎಫ್ 2’ ಸಿನಿಮಾ (KGF: Chapter 2) ಮಾಡಿದ ಮೋಡಿ ತುಂಬಾನೇ ದೊಡ್ಡದು.

ಈ ಚಿತ್ರ ಬಾಲಿವುಡ್ ಮಂದಿಯೂ ತಿರುಗಿ ನೋಡುವಂತೆ ಮಾಡಿದೆ. ಈ ಚಿತ್ರದಿಂದ ಯಶ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಏಪ್ರಿಲ್ 14ರಂದು ಥಿಯೇಟರ್​ನಲ್ಲಿ ರಿಲೀಸ್ ಆದ‘ಕೆಜಿಎಫ್ 2’ಚಿತ್ರ ನಂತರ ಒಟಿಟಿಗೆ ಕಾಲಿಟ್ಟಿತು. ಈಗ ಸಿನಿಮಾ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ಈ ಬಗ್ಗೆ ವಾಹಿನಿಯಿಂದ ಅಧಿಕೃತ ಘೋಷಣೆ ಆಗಿದೆ.

ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್’ ಸಿನಿಮಾ ದೊಡ್ಡ ಯಶಸ್ಸು ಕಂಡಿತು. ಅದರ ಮುಂದುವರಿದ ಭಾಗವಾಗಿ ತೆರೆಗೆ ಬಂದ ‘ಕೆಜಿಎಫ್ 2’ ಚಿತ್ರ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಪ್ರಶಾಂತ್ ನೀಲ್ ಸಾಮರ್ಥ್ಯ ಏನು ಎಂಬುದು ಇಡೀ ಜಗತ್ತಿಗೆ ಮತ್ತೊಮ್ಮೆ ಮನವರಿಕೆ ಆಯಿತು. ಈ ಚಿತ್ರದಿಂದ ಕನ್ನಡ ಚಿತ್ರರಂಗದ ಹಿರಿಮೆ ಮತ್ತಷ್ಟು ಹೆಚ್ಚಿತು. ಬಾಕ್ಸ್ ಆಫೀಸ್​ನಲ್ಲಿ 1250 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದ್ದು ಈ ಚಿತ್ರದ ಹೆಚ್ಚುಗಾರಿಕೆ.

‘ಕೆಜಿಎಫ್ 2’ ಚಿತ್ರವನ್ನು ಸಾಕಷ್ಟು ಮಂದಿ ಥಿಯೇಟರ್​ನಲ್ಲಿ ಕಣ್ತುಂಬಿಕೊಂಡರು. ನಂತರ ಒಟಿಟಿಯಲ್ಲಿ ರಿಲೀಸ್ ಆದಾಗಲೂ ಸಿನಿಮಾ ನೋಡಿ ಖುಷಿಪಟ್ಟರು. ಈಗ ಸಿನಿಮಾ ಟಿವಿಯಲ್ಲಿ ಬರುತ್ತಿದೆ. ಇದಕ್ಕಾಗಿ ಸಾಕಷ್ಟು ಮಂದಿ ಕಾದಿದ್ದರು. ಅಂತೂ ಆ ದಿನ ಬಂದಿದೆ. ಈ ಬಗ್ಗೆ ಪ್ರೋಮೋ ಹಂಚಿಕೊಂಡಿರುವ ಜೀ ಕನ್ನಡ ವಾಹಿನಿ, ‘ಪ್ರಪಂಚದಲ್ಲಿರೋ ಬಂಗಾರನೆಲ್ಲ ಅಮ್ಮನಿಗೆ ತಂದುಕೊಡೋ ಧೀರ ಸುಲ್ತಾನ ನಿಮ್ಮನೆ ಪರದೆಯಲ್ಲೂ ಬರ್ತಿದ್ದಾನೆ. ಕೆಜಿಎಫ್ ಚಾಪ್ಟರ್-2 ಅತಿ ಶೀಘ್ರದಲ್ಲಿ’ ಎಂದು ಕ್ಯಾಪ್ಶನ್ ನೀಡಿದೆ.

ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಸಾಮಾನ್ಯವಾಗಿ ದೊಡ್ಡ ದೊಡ್ಡ ಸಿನಿಮಾಗಳನ್ನು ಪ್ರಸಾರ ಮಾಡಲಾಗುತ್ತದೆ. ‘ಕೆಜಿಎಫ್ 2’ ಕೂಡ ಮುಂಬರುವ ವಿಶೇಷ ದಿನಗಳಲ್ಲಿ ಸಣ್ಣ ಪರದೆಗೆ ಅಪ್ಪಳಿಸಬಹುದು ಎನ್ನಲಾಗುತ್ತಿದೆ. ಆ ದಿನಾಂಕ ಆದಷ್ಟು ಬೇಗ ಘೋಷಣೆ ಆಗಲಿ ಎಂದು ವೀಕ್ಷಕರು ಕಾಯುತ್ತಿದ್ದಾರೆ.

‘ಕೆಜಿಎಫ್ 2’ ಚಿತ್ರದಲ್ಲಿ ಯಶ್​ಗೆ ಜತೆಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟ ಸಂಜಯ್ ದತ್ ಪ್ರಮುಖ ವಿಲನ್ ಪಾತ್ರ ಮಾಡಿದ್ದಾರೆ. ರವೀನಾ ಟಂಡನ್ ಪ್ರಧಾನಿ ರಮಿಕಾ ಸೇನ್ ಆಗಿ ಕಾಣಿಸಿಕೊಂಡಿದ್ದಾರೆ. ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಫಿಲ್ಮ್ಸ್​ ಈ ಚಿತ್ರಕ್ಕೆ ಬಂಡವಾಳ ಹೂಡಿದೆ. ಪ್ರಶಾಂತ್ ನೀಲ್ ನಿರ್ದೇಶನ ಇರುವ ಈ ಚಿತ್ರಕ್ಕೆ ಭುವನ್ ಗೌಡ ಛಾಯಾಗ್ರಹಣ ಇದೆ.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: