fbpx
Crime NewsKarnataka NewsPolitics

ವಂಚನೆ ಪ್ರಕರಣದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ

ನನ್ನ ವಿರುದ್ಧದ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ಮಹಾನಾಯಕ ಇದ್ದಾರೆ

ಬೆಳಗಾವಿ: ತಮ್ಮ ವಿರುದ್ಧದ ಬ್ಲಾಕ್ ಮೇಲ್ ಹಾಗೂ ವಂಚನೆ ಪ್ರಕರಣದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಇದರ ಹಿಂದೆ ಕಾಂಗ್ರೆಸ್ ಮಹಾನಾಯಕರೊಬ್ಬರ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನವ್ಯಶ್ರೀ, ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಬೆಂಬಿಸಲಾಯ್ತು.

ಮತ್ತೊಂದು ಹೊಸ ಬಾಂಬ್ ಅತೃಪ್ತ ಶಾಸಕರ ಮುಂಬೈ ಸೀಕ್ರೆಟ್ ಬಿಚ್ಚಿಟ್ಟ ನವ್ಯಶ್ರೀ: ಕಾಂಗ್ರೆಸ್’ನಲ್ಲಿ ತಳಮಳ

ಆ ಸಂದರ್ಭದಲ್ಲಿ ನಾನು ವಿದೇಶದಲ್ಲಿದ್ದೆ. ವಾಪಸ್ ಭಾರತಕ್ಕೆ ಬಂದಾಗ ಈ ಬಗ್ಗೆ ಗೊತ್ತಾಯಿತು. ಪರಿಶೀಲನೆ ನಡೆಸಿ ದೂರು ಕೊಡಬೇಕು ಎನ್ನುವಷ್ಟರಲ್ಲಿ ರಾಜಕುಮಾರ ಟಾಕಳೆ ರಾತ್ರೋರಾತ್ರಿ ಬೆಳಗಾವಿ ಎಪಿಎಂಸಿ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ನನ್ನ ವಿರುದ್ಧ ಹನಿಟ್ರ್ಯಾಪ್ ಆರೋಪ ಮಾಡಿದ್ದಾರೆ ಎಂದರು.

ರಾಜಕುಮಾರ್ ಟಾಕಳೆ; ನವ್ಯಶ್ರೀ ರಾವ್ ಪ್ರಕರಣಕ್ಕೆ ಮತ್ತೊಂದು ತಿರುವು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು

ರಾಜಕುಮಾರ್ ಟಾಕಳೆ ಹಾಗೂ ನಾನು 2020 ಮೇ ತಿಂಗಳಲ್ಲಿ ಬೆಂಗಳೂರಿನ ಕುಮಾರ ಕೃಪಾ ಪ್ರವಾಸಿ ಮಂದಿರದ ಹಿಂದಿರುವ ಗಣೇಶ ದೇವಸ್ಥಾನದಲ್ಲಿ ವಿವಾಹವಾಗಿದ್ದೆವೆ. ರಾಜಕುಮಾರ್ ಟಾಕಳೆ ನನ್ನ ಗಂಡ. ಆತನಿಂದ ನನಗೆ ಅನ್ಯಾಯವಾಗಿದೆ. ಈ ಹಿಂದೆ ನಾನು ಎರಡು‌ ಬಾರಿ ಬೆಳಗಾವಿ ‌ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಮೊದಲ ಪತ್ನಿ ಇದ್ದರೂ ರಾಜಕುಮಾರ್ ಟಾಕಳೆ ನನ್ನನ್ನು ಕಿಡ್ನಾಪ್ ಮಾಡಿ ಮದುವೆಯಾಗಿದ್ದ. ಅಶ್ಲೀಲ ವಿಡಿಯೋ ಚಿತ್ರಿಕರಣ ಮಾಡಿ ವೆಬ್ ಸೈಟ್ ಗೆ ಮಾರಾಟ ಮಾಡಿದ್ದಾನೆ. ಸಾರ್ವಜನಿಕ ಜೀವನದಲ್ಲಿ ನನ್ನ ಮಾನ ತಗೆದಿದ್ದಾನೆ. ಆತನ ವಿರುದ್ಧ ಈಗಾಗಲೇ ನಾನು ದೂರು ದಾಖಲಿಸಿದ್ದೇನೆ. ಕಮಿಷ್ನರ್ ಭೇಟಿಯಾಗಿ ನನಗೆ ನ್ಯಾಯ ಒದಗಿಸುವಂತೆ ಕೇಳಿದ್ದೇನೆ ಎಂದು ಹೇಳಿದರು.

ವಂಚನೆ ಪ್ರಕರಣದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಹಾಗೂ ರಾಷ್ಟ್ರೀಯ ನಾಯಕರ ಜತೆ ಇರುವ ಫೋಟೋ ಇಟ್ಟುಕೊಂಡು ಅಪಪ್ರಚಾರ ಮಾಡಲಾಗುತ್ತಿದೆ. ರಾಜಕುಮಾರ್ ಟಾಕಳೆ ಹಾಗೂ ನನ್ನ ನಡುವಿನ ಕಿತ್ತಾಟದ ಹಿಂದೆ ಕಾಂಗ್ರೆಸ್ ನ ಮಹಾನಾಯಕರೊಬ್ಬರಿದ್ದಾರೆ. ಅವರು ಟಾಕಳೆಯನ್ನು ದಾಳವನ್ನಾಗಿ ಮಾಡಿಕೊಂಡು ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು.

ಇದೆಲ್ಲದರ ಹಿಂದೆ ಇರುವವರು ಚೆನ್ನಪಟ್ಟಣದ ಕಾಂಗ್ರೆಸ್ ಮಹಾನಾಯಕ. ಅವರು ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯೂ ಆಗಿದ್ದಾರೆ. ಅವರ ಜತೆ ಪತ್ರಿಕಾ ಸಂಪಾದಕರೊಬ್ಬರಿದ್ದಾರೆ. ಅವರ ಹೆಸರನ್ನು ನಾನು ಹೇಳಲ್ಲ. ತನಿಖೆ ಬಳಿಕ ಎಲ್ಲರ ಮುಖವಾಡ ಕಳಚಲಿದೆ ಎಂದು ಹೇಳಿದ್ದಾರೆ.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d