fbpx
Belagavi NewsKarnataka News

ಶಿರಾಡಿ ಘಾಟ್ ಗೆ ಟನಲ್, ಪೀಣ್ಯ- ಹೊಸೂರು ಸುರಂಗ ರಸ್ತೆ ನಿರ್ಮಾಣ: ಗಡ್ಕರಿಗೆ ಸತೀಶ್‌ ಜಾರಕಿಹೊಳಿ ಮನವಿ

ರಾಜ್ಯ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭೇಟಿ ಮಾಡಿ ಪ್ರಮುಖ ವಿಚಾರಗಳ ಉರೀತು ಚರ್ಚೆ ನಡೆಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿದ ಸತೀಶ್‌ ಜಾರಕಿಹೊಳಿ, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತುಮಕೂರು ರಸ್ತೆಯ ಪೀಣ್ಯ ಕೈಗಾರಿಕಾ ಪ್ರದೇಶದಿಂದ ತಮಿಳುನಾಡಿನ ಗಡಿ ಪ್ರದೇಶ ಹೊಸೂರುವರೆಗೆ ಸುರಂಗ ರಸ್ತೆಯನ್ನು (Bengaluru Peenya- Hosur tunnel road) ನಿರ್ಮಾಣ ಮಾಡುವಂತೆ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದರು.

 

ಈ ವೇಳೆ ರಾಜ್ಯದಲ್ಲಿ ಒಟ್ಟು 14 ಯೋಜನೆಗಳನ್ನು ನಿರ್ಮಾಣ ಮಾಡುಂತೆ ಕೇಂದ್ರ ಸಚಿವರಿಗೆ ಮನವಿಯನ್ನು ಸಲ್ಲಿಕೆ ಮಾಡಿದರು. ಅದ್ರಲ್ಲಿ ಹಲವು ಫ್ಲೈಓವರ್‌ ರಸ್ತೆಗಳು, ಘಾಟ್‌ ರಸ್ತೆಗಳು, ಸುರಂಗ ರಸ್ತೆಗಳು ಹಾಗೂ ಇತರೆ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಾಣ ಮಾಡುವಂತೆ ಪ್ರಸ್ತಾವನೆ ಒಳಗೊಂಡಿದೆ.

ರಾಜ್ಯದ ಪ್ರಮುಖ ಮಾರ್ಗವಾದ ಶಿರಾಡಿ ಘಾಟ್ ಟನಲ್ , ಹೊನ್ನಾವರ- ಕುಮುಟಾ ಫ್ಲೈ ಓವರ್, ಬೆಂಗಳೂರಿನಲ್ಲಿ ಪಿಣ್ಯ- ಹೊಸೂರು ಸುರಂಗ ಮಾರ್ಗ ಹಾಗೂ ಬೆಂಗಳೂರು ಕೇಂದ್ರ ಭಾಗದಿಂದ ಹೆಬ್ಬಾಳಕ್ಕೆ ಸಂಪರ್ಕ ಕಲ್ಪಿಸುವಂತೆ (ತುಮಕೂರು ರಸ್ತೆಯಲ್ಲಿರುವ ಡಾ. ಶಿವಕುಮಾರ್‌ ಸ್ವಾಮೀಜಿ ಮೇಲ್ಸೇತುವೆ ಮಾದರಿ) ಫ್ಲೈಓವರ್‌ ನಿರ್ಮಾಣ ಮಾಡುವಂತೆ ಮನವಿ ಸಲ್ಲಿಕೆ ಮಾಡಿದರು. ಉಳಿದಂತೆ ಕಲಬುರಗಿ ನಗರಕ್ಕೆ ಬೈಪಾಸ್ ರಸ್ತೆ ನಿರ್ಮಾಣ ಮಾಡುವಂತೆಯೂ ಪ್ರಸ್ತಾವನೆಯಲ್ಲಿ ಮನವಿ ಮಾಡಲಾಗಿದೆ.

ಅದೇ ರೀತಿ ಬೆಳಗಾವಿ ನಗರ- ಪುಣೆ -ಬೆಂಗಳೂರು ರಸ್ತೆ ಉನ್ನತೀಕರಣ ಮಾಡಬೇಕು. ರಾಯಚೂರು, ಗದಗ ಮತ್ತು ಶಿವಮೊಗ್ಗ ನಗರಗಳಿಗೆ ರಿಂಗ್ ರಸ್ತೆಯನ್ನು ನಿರ್ಮಾಣ ಮಾಡಬೇಕು. ಮೈಸೂರು ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ನಲ್ಲಿ ಫೈಓವರ್ ನಿರ್ಮಾಣ ಮಾಡುವಂತೆಯೂ ಮನವಿ ಮಾಡಲಾಗಿದೆ. ಈ ಎಲ್ಲ ಮನವಿ ಪುರಸ್ಕರಿಸಿದಲ್ಲಿ ರಾಜ್ಯದ ಪ್ರಮುಖ ನಗರಗಳಲ್ಲಿ ಉಂಟಾಗುತ್ತಿದ್ದ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಕೋರಿಕೊಂಡಿದ್ದಾರೆ.

ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ಮಾರ್ಗವನ್ನು ಕೇಂದ್ರ ಸರ್ಕಾರ 9 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಆದರೆ, ಈ ಹಿಂದೆ ಸಂಚಾರಕ್ಕೆ ಅನುಕೂಲವಾಗಿದ್ದ ಹಳೆಯ ಬೆಂಗಳೂರು- ಮೈಸೂರು ರಸ್ತೆಯನ್ನೂ ಅಭಿವೃದ್ಧಿ ಮಾಡಬೇಕು. ಈ ಹಳೆಯ ರಸ್ತೆಯನ್ನು ಅಭಿವೃದ್ಧಿ ಮಾಡುವುದರಿಂದ ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಮೈಸೂರು ನಗರದ ಜನರಿಗೆ ಸಹಕಾರಿ ಆಗಲಿದೆ ಎಂದು ಮನವಿ ಸಲ್ಲಿಸಿದ್ದಾರೆ.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: