fbpx
Karnataka News

ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ

ಬೆಳಗಾವಿ :. ಬೆಳಗಾವಿ ಜಿಲ್ಲೆಗೆ ಸಂಭಂದಿಸಿದಂತೆ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸಾರ್ವತ್ರಿಕ ಚುನಾವಣೆ ಹಾಗೂ ಉಪ ಚುನಾವಣೆ -೨೦೨೩ ರ ಅಧಿಸೂಚನೆಯನ್ನು ಹೊರಡಿಸಿರುತ್ತಾರೆ.

ನಾಮ ಪತ್ರ ಸಲ್ಲಿಸಲು ದಿನಾಂಕ ಜುಲೈ. ೧೨, ೨೦೨೩ ಬುಧವಾರ ಕೊನೆಯ ದಿನವಾಗಿರುತ್ತದೆ. ಗುರುವಾರ (ಜು.೧೩) ನಾಮ ಪತ್ರ ಪರಿಶೀಲಿಸುವ ಕೊನೆಯ ದಿನಾಂಕವಾಗಿರುತ್ತದೆ. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಜು.೧೫ ಕೊನೆಯ ದಿನಾಂಕವಾಗಿರುತ್ತದೆ ಮತದಾನ ಅವಶ್ಯವಿದ್ದರೆ, ಜುಲೈ.೨೩ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಮತದಾನ ನಡೆಸಲಾಗುವುದು.

ಅದೇ ರೀತಿಯಲ್ಲಿ ಮರು ಮತದಾನ ಅವಶ್ಯವಿದ್ದಲ್ಲಿ, ಜುಲೈ.೨೫ ರಂದು ಬೆಳಿಗ್ಗೆ ೭ ಗಂಟೆಯಿಂದ ೫ ಸಂಜೆ ಗಂಟೆಯವರೆಗೆ ಮರು ಮತದಾನ ನಡೆಯಲಿವೆ. ಜು.೨೬ ರಂದು ಬೆಳಿಗ್ಗೆ ೮ ಗಂಟೆಯಿಂದ ಸಂಬಂಧಿತ ತಾಲೂಕಾ ಕೇಂದ್ರಗಳಲ್ಲಿ ಮತಗಳ ಎಣಿಕೆ ಪ್ರಕ್ರಿಯೆ ನಡೆಸಲಾಗುವುದು.

ಸಾರ್ವತ್ರಿಕ ಚುನಾವಣೆ:
ರಾಯಬಾಗ ತಾಲೂಕಿನ ಮಂಟೂರು ಗ್ರಾಮ ಪಂಚಾಯತಿಯ ವಾರ್ಡ್ ನಂ ೧ ರಲ್ಲಿ ೪ ಸದಸ್ಯ ಸ್ಥಾನಗಳು, ಮಂಟೂರು ವಾರ್ಡ್ ನಂ ೨ ರಲ್ಲಿ ೩ ಸದಸ್ಯರ ಸ್ಥಾನ ಹಾಗೂ ಮಂಟೂರು ವಾರ್ಡ್ ೩ ರಲ್ಲಿ ೩ ಸೇರಿದಂತೆ ಒಟ್ಟು ೧೦ ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಉಪ ಚುನಾವಣೆ:
ನಿಪ್ಪಾಣಿ ತಾಲೂಕಿನ ಸೌಂದಲಗಾ ಗ್ರಾಮ ಪಂಚಾಯತಿಯ ವಾರ್ಡ್ ೫ ರಲ್ಲಿ ೧ ಸದಸ್ಯ ಸ್ಥಾನ, ನಿಪ್ಪಾಣಿ ತಾಲೂಕಿನ ಸೌಂದಲಗಾ ಗ್ರಾಮ ಪಂಚಾಯತಿಯ ವಾರ್ಡ್ ನಂ ೬ ರಲ್ಲಿ ೧ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.

ಚಿಕ್ಕೋಡಿ ತಾಲೂಕಿನ ವಡ್ರಾಳ ಗ್ರಾಮ ಪಂಚಾಯತಿಯ ವಾರ್ಡ್ ನಂ ೨ ರಲ್ಲಿ ೧ ಸದಸ್ಯರ ಸ್ಥಾನ, ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತಿಯ ವಾರ್ಡ್ ನಂ ೩ ರಲ್ಲಿ ೧ ಸದಸ್ಯರ ಸ್ಥಾನ, ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮ ಪಂಚಾಯತಿಯ ವಾರ್ಡ್ ೩ ರಲ್ಲಿ ೧, ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮ ಪಂಚಾಯತಿಯ ವಾರ್ಡ್ ೪ ರಲ್ಲಿ ೧ ಹಾಗೂ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮ ಪಂಚಾಯತಿಯ ವಾರ್ಡ್ ನಂ ೫ ರಲ್ಲಿ ೧ ಸದಸ್ಯರ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.

ರಾಯಬಾಗ ತಾಲೂಕಿನ ರಾಯಬಾಗ ಗ್ರಾಮಿಣ ಗ್ರಾಮ ಪಂಚಾಯತಿಯ ವಾರ್ಡ್ ೬ ರಲ್ಲಿ ೧ ಸದಸ್ಯರ ಸ್ಥಾನ, ಗೋಕಾಕ್ ತಾಲೂಕಿನ ನಂದಗಾಂವ ಗ್ರಾಮ ಪಂಚಾಯತಿಯ ವಾರ್ಡ್ ನಂ ೩ ರಲ್ಲಿ ೧, ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮ ಪಂಚಾಯತಿಯ ವಾರ್ಡ್ ನಂ ೫ ರಲ್ಲಿ ೧, ಬೈಲಹೊಂಗಲ ತಾಲೂಕಿನ ಕಡೋಲಿ ಗ್ರಾಮ ಪಂಚಾಯತಿಯ ವಾರ್ಡ್ ನಂ ೧ ರಲ್ಲಿ ೧, ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮ ಪಂಚಾಯತಿಯ ವಾರ್ಡ್ ನಂ ೮ ರಲ್ಲಿ ೧, ಬೆಳಗಾವಿ ತಾಲೂಕಿನ ಧಾಮಣಿ ಎಸ್ ಗ್ರಾಮ ಪಂಚಾಯತಿಯ ವಾರ್ಡ್ ನಂ ೫ ರಲ್ಲಿ ೧ ಹಾಗೂ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮ ಪಂಚಾಯತಿಯ ವಾರ್ಡ್ ನಂ ೨ ರಲ್ಲಿ ೧ ಸದಸ್ಯರ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

flash24x7.com

Tousif M Mulla National President public Rights Cell International Humanity Rights & Media Organizationn Karnataka Human Rights Awareness Forum Mumbai Karnataka Mainorite President Karnataka Human Rights Panel Belagavi District Vice President 99Indianews Belagavi District Reporter Indian News Voice Of Nation INVN News

Related Articles

Leave a Reply

Your email address will not be published. Required fields are marked *

error: Content is protected !!
%d bloggers like this: