Traveling Tips
-
Indian tourists: ಮಾಲ್ಡೀವ್ಸ್ಗೆ ಭೇಟಿ ನೀಡುವ ಭಾರತೀಯರ ಸಂಖ್ಯೆ ಶೇ.33ರಷ್ಟು ಇಳಿಕೆ
ಮಾಲೆ: ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಹಿನ್ನೆಲೆಯಲ್ಲಿ ಮಾಲ್ಡೀವ್ಸ್ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ಶೇ.33ರಷ್ಟು ಇಳಿಕೆಯಾಗಿದೆ. 2023ರಲ್ಲಿ ಮಾಲ್ಡೀವ್ಸ್ಗೆ ಭೇಟಿ ನೀಡಿದ ವಿದೇಶಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರತ ನಂ.1 ಸ್ಥಾನದಲ್ಲಿತ್ತು. ಈಗ ಅದು 6ನೇ ಸ್ಥಾನಕ್ಕೆ ಕುಸಿದಿದೆ. ವಿದೇಶಾಂಗ ಸಚಿವಾಲಯದ ಮಾಹಿತಿ ಪ್ರಕಾರ, ಈ ವರ್ಷದ ಮಾ.2ರವರೆಗೆ 27,224 ಭಾರತೀಯ ಪ್ರವಾಸಿಗರು ಮಾಲ್ಡೀವ್ಸ್ಗೆ ಭೇಟಿ ನೀಡಿದ್ದಾರೆ. ಇದೇ ಅವಧಿಯಲ್ಲಿ ಕಳೆದ ವರ್ಷ ಒಟ್ಟು 41,224 ಭಾರತೀಯರು ಭೇಟಿ ನೀಡಿದ್ದರು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಪ್ರವಾಸಿಗರ ಸಂಖ್ಯೆ ಶೇ.33ರಷ್ಟು ತಗ್ಗಿದೆ.…
Read More » -
ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ ಎಚ್ಚರಿಕೆ: ಮನೆ ಬಿಟ್ಟು ಹೊರ ಬರುವ ಮುನ್ನ ಹುಷಾರ್!
ಉತ್ತರ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು ಜನ ಮನೆ ಬಿಟ್ಟು ಹೊರಬಾರದಂತ ಪರಿಸ್ಥಿತಿ ಎದುರಾಗಿದೆ. ಒಂದೆಡೆ ನೀರಿನ ಸಮಸ್ಯೆ ಮತ್ತೊಂದೆಡೆ ತಾಪಮಾನದ ಏರಿಕೆಗೆ ಜನ ತತ್ತರಿಸಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಉಷ್ಣ ಅಲೆ ಎದುರಾಗಿದ್ದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.ರಾಯಚೂರು, ಗದಗ, ವಿಜಯಪುರ, ಕಲಬುರಗಿ, ಬೀದರ್ ಬಾಗಲಕೋಟೆ, ಯಾದಗಿರಿ, ಕೊಪ್ಪಳ ಮೊದಲಾದ ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಅವಧಿಯಲ್ಲಿ ಭಾರೀ ಪ್ರಮಾಣದ ಮಳೆ ಕೊರತೆಯಿಂದ ಬರ ಪರಿಸ್ಥಿತಿ…
Read More »